24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

ಬೆಳ್ತಂಗಡಿ: ಪದವಿ ಮುಗಿಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಘೋಷಿಸಬೇಕು.2017 ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪೂರ್ವಾನ್ವಯಗೊಳಿಸಬಾರದು ಎಂಬುದು ಸೇರಿದಂತೆ ತಮ್ಮ ಅನೇಕ ಬೇಡಿಕೆಗಳನ್ನು ಮುಂದಿರಿಸಿಕೊಂಡು ಪ್ರಾಥಮಿಕ ಶಾಲಾ ಶಿಕ್ಷಕರು ರಾಜ್ಯಾದ್ಯಂತ ಬೀದಿಗಿಳಿಯಲು ಸಿದ್ಧರಾಗಿದ್ದಾರೆ. ಆಗಸ್ಟ್ 12 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹಕ್ಕೆ ತಯಾರಾಗಿದ್ದಾರೆ. ಹೋರಾಟದ ಮೊದಲ ಭಾಗವಾಗಿ ಬೆಳ್ತಂಗಡಿ ತಾಲೂಕು ಹಂತದಲ್ಲಿ ಆ.7 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಎಚ್ಚರಿಕೆ ಮನವಿ ನೀಡುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಎಚ್.ಕೆ.ಮಾತನಾಡಿ,’ 2016 ರವರೆಗೆ 1-7 ತರಗತಿಗಳಿಗೆ ಪಾಠ ಮಾಡಲು ಅರ್ಹರಾಗಿದ್ದ ನಮ್ಮನ್ನು ಏಕಾಏಕಿ 1-5 ಕ್ಕೆ ಪಾಠ ಮಾಡುವ ಶಿಕ್ಷಕರಾಗಿ,ಪಿ.ಎಸ್.ಟಿ.ಎಂಬ ಹೆಸರಲ್ಲಿ ಹಿಂಬಡ್ತಿ ಮಾಡಿ ಮಾನಸಿಕವಾಗಿ ಕುಗ್ಗಿಸಲಾಗಿದೆ. ಜೊತೆಗೆ ಮುಖ್ಯ ಶಿಕ್ಷಕರ ಬಡ್ತಿಗೂ ತೊಂದರೆಯಾಗಿದೆ.ಇದರ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಮನವಿ ನೀಡಿದರೂ ಸರಕಾರಗಳು ಸ್ಪಂದಿಸಿಲ್ಲ.ಇದೀಗ ಶಿಕ್ಷಕರ ತಾಳ್ಮೆಯ ಕಟ್ಟೆ ಒಡೆದಿದೆ.ಆದ್ದರಿಂದ ಅನಿವಾರ್ಯವಾಗಿ ಬೀದಿಗೆ ಇಳಿದಿದ್ದೇವೆ.ಇದೇ ಆಗಸ್ಟ್ 12 ರ ‘ಬೆಂಗಳೂರು ಚಲೋ’ಗೆ ನಮ್ಮ ತಾಲೂಕಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಲಿದ್ದೇವೆ’ ಎಂದರು.


ಎಲ್ಲಾ ಶಿಕ್ಷಕರು ಒಗ್ಗೂಡಿ ಹೋರಾಡೋಣ-ರಾಜೇಶ್ ನೆಲ್ಯಾಡಿ.
ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ರಾಜೇಶ್ ನೆಲ್ಯಾಡಿ ಮಾತನಾಡಿ,’ರಾಜ್ಯ ಸಂಘ ನೀಡಿದ ನಿರ್ದೇಶನದಂತೆ,ನಾವು ಇಂದು ತಾಲೂಕು ಹಂತ,ಜಿಲ್ಲಾಹಂತದಲ್ಲಿ ಎಚ್ಚರಿಕೆ ಮನವಿ ಸಲ್ಲಿಸುತ್ತಿದ್ದೇವೆ.ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು.ಇದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡೋಣ.ಎಲ್ಲರೂ ‘ಬೆಂಗಳೂರು ಚಲೋ’ಗೆ ಬೆಂಬಲ ನೀಡೋಣ.ಅನಿವಾರ್ಯವಾಗಿ ಬರಲಾಗದವರು ಕರ್ತವ್ಯಕ್ಕೆ ಗೈರಾಗುವ ಮೂಲಕ ಬೆಂಬಲ ನೀಡಬೇಕೆಂದರು. ಸಂಘದ ತಾಲೂಕು ಹಂತದ ಪದಾಧಿಕಾರಿಗಳು,ಶಿಕ್ಷಕರು ಉಪಸ್ಥಿತರಿದ್ದರು.ಮನವಿ ಸ್ವೀಕರಿಸಿದ ಬಿ.ಇ.ಓ.,ತಹಸೀಲ್ದಾರ್ ಸರಕಾರಕ್ಕೆ ನಿಮ್ಮ ಬೇಡಿಕೆಗಳನ್ನು ಕಳುಹಿಸಲಾಗುವುದು ಎಂದರು.ಶಾಸಕರ ಕಚೇರಿಯಲ್ಲಿ ಅವರ ಅನುಪಸ್ಥಿಯಲ್ಲಿ ಆಪ್ತ ಸಹಾಯಕರ ಮೂಲಕ ಮನವಿ ನೀಡಲಾಯಿತು.


ಶಿಕ್ಷಕರ ಪ್ರಮುಖ ಹಕ್ಕೊತ್ತಾಯಗಳು
1) 2017 ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸಿ,ಪದವಿ ಪೂರ್ಣಗೊಳಿಸಿರುವ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು ಪದನಾಮೀಕರಿಸುವುದು.
2) ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು.
3)ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.

Related posts

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!