23.2 C
ಪುತ್ತೂರು, ಬೆಳ್ತಂಗಡಿ
August 6, 2026
Uncategorized

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

ಉಜಿರೆ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ, ರೋಟರಿ ಕ್ಲಬ್ಬೆಳ್ತಂಗಡಿ, ಎಸ್.ಡಿ.ಎಂ.ಕಾಲೇಜು ಎನ್.ಎಸ್.ಎಸ್ ಘಟಕ, ತಾಲೂಕು ಪತ್ರಕರ್ತರ ಸಂಘ ಮತ್ತಿತರರು ಸಂಘಟನೆಗಳ ಜಂಟಿ ಆಶ್ರಯದಲ್ಲಿ ಆ.18ರಂದು ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ.ಮೋಹನ್ ಕುಮಾರ್ ತಿಳಿಸಿದ್ದಾರೆ.

ಅವರು ಆ.8ರಂದು ಉಜಿರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.5 ವರ್ಷಗಳ ಹಿಂದೆ ಚಾರ್ಮಾಡಿಯಲ್ಲಿ ಬಂದ ಪ್ರವಾಹದ ಸಂದರ್ಭದಲ್ಲಿ ಹಾನಿಯಾದ ಕುಟುಂಬದವರ ಬದುಕು ಕಟ್ಟಲು ಹುಟ್ಟಿಕೊಂಡ ಬದುಕು ಕಟ್ಟೋಣ ಬನ್ನಿ ತಂಡ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಇತರ ಸಂಘಟನೆಯೊಂದಿಗೆ ಸೇರಿಕೊಂಡು ನಡೆಸುತ್ತಿದೆ ಎಂದರು. ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಆ.18ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಇದರಲ್ಲಿ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನದ ಕುರಿತು ಪ್ರೇರಣೆ ನೀಡುವ ಕಾರ್ಯ ಮಾಡಲಾಗುವುದು ಎಂದು ವಿವರಿಸಿದರು

ರಕ್ತದಾನದ ಬಗ್ಗೆ ಪ್ರೇರಣೆ:

ರೋಟರಿ ಕ್ಲಬ್‌ ಅಧ್ಯಕ್ಷ ಪೂರನ್ ವರ್ಮ ಮಾತನಾಡಿ ಈ ಬಾರಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದ ಕೊರತೆ ಇದ್ದು ಇಂತಹ ಶಿಬಿರದ ಮೂಲಕ ರಕ್ತದಾನದ ಬಗ್ಗೆ ಪ್ರೇರಣೆ ನೀಡುವ ಕೆಲಸ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌.ಡಿ.ಎಂ ಕಾಲೇಜು ಎನ್‌.ಎಸ್‌.ಎಸ್ ಘಟಕದ ಮುಖ್ಯಸ್ಥ ಮಹೇಶ್‌, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತೇಶ್‌ ಇಳಂತಿಲ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಾಜಿ ಕಾರ್ಯದರ್ಶಿ ಶ್ರೀಧರ ಕೆ.ವಿ., ಉಪಸ್ಥಿತರಿದ್ದರು.

Related posts

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!