
ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಹಾಕೋಟೆ ಎಂಬಲ್ಲಿರುವ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿದೆ .ಸುಮಾರು 25 ಕ್ಕೂ ಹೆಚ್ಚಿನ ಕುಟುಂಬದ ಕೃಷಿಕರು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರು ನಿತ್ಯ ಓಡಾಡುವುದಕ್ಕೆ ಪರಾಡು ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ಮಣ್ಣಿನ ರಸ್ತೆಯಲ್ಲಿ ಸಣ್ಣಪುಟ್ಟ ವಾಹನಗಳು ಓಡಾಡುವುದಕ್ಕೆ ಭಾರೀ ತೊಂದರೆ ಆಗುತ್ತದೆ. ಸ್ಥಳೀಯ ಪಂಚಾಯತು.

ಜನಪ್ರತಿನಿಧಿಗಳು,ಸಂಬಂಧಿಸಿದ ಇಲಾಖೆ ಸಿಬ್ಬಂದಿಗಳು ಕೆಸರು ರಸ್ತೆಯ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿದರು.













