ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ಪ್ರಸಾದ್ ಉದ್ಘಾಟನೆ ಮಾಡಿದರು.

ಸಂಪನ್ಮೂಲ ವ್ಯಕ್ತಿ ಗೋಪಿ ಸಿಸ್ಟರ್ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಗಳು ದಯಾನಂದ ಪೂಜಾರಿ ಪೌಷ್ಟಿಕ ಆಹಾರ ಮಾಡಿಕೊಂಡು ಬಂದವರಿಗೆ ಬಹುಮಾನ ವಿತರಿಸಿದರು. ವಲಯ ಮೇಲ್ವಿಚಾರಕಿ ದಮಯಂತಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ,ಯುವಕ ಮಂಡಲದ ಉಪಾಧ್ಯಕ್ಷರು ಲೋಹಿತ್, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮ ಕಾರ್ಯಕ್ರಮ ನಿರೂಪಣೆ ಮಾಡಿ ಸೇವಾಪ್ರತಿನಿಧಿ ಶಶಿಧರ್ ಕುಲಾಲ್ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಧನ್ಯವಾದವಿತ್ತರು.













