24.7 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya
error: Content is protected !!