May 6, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya
error: Content is protected !!