24 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya
error: Content is protected !!