23.4 C
ಪುತ್ತೂರು, ಬೆಳ್ತಂಗಡಿ
August 6, 2026
ತಾಲೂಕು ಸುದ್ದಿ

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

ಬೆಳ್ತಂಗಡಿ : . ನಾಳ ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ ಹಾಗೂ ಪೋಷಕರ ಸಭೆ ಆ.6.ರಂದು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ನಾಳ ಅಂಗನವಾಡಿ ಕೇಂದ್ರ 42 ಹಿಂದೆ ಪ್ರಾರಂಭವಾಗಿದ್ದು,. 38 ವರ್ಷಗಳ ಹಿಂದೆ ನಿರ್ಮಾಣವಾದ ಕಟ್ಟಡ ಶಿಥಿಲವಾಗಿದೆ.ನೂತನ ಕಟ್ಟಡ ರಚನೆ ಆಗಬೇಕೆಂದು ಪೋಷಕರು ಬಾಲ ವಿಕಾಸ ಸಮಿತಿಯವರು ಒತ್ತಾಯಿಸಿದರು. ಈಗಾಗಲೇ ಅಂಗನವಾಡಿ ಕೇಂದ್ರ ವಠಾರದಲ್ಲಿದ್ದ ಅಪಾಯಕಾರಿ ಮರಗಳನ್ನು ತೆರವು ಗೊಳಿಸಿದ್ದಾರೆ.

ಅಂಗನವಾಡಿ ಕೇಂದ್ರಕ್ಕೆ ಮೀಸಲಾದ 0.15 ಸೆಂಟ್ಸ್ ಜಾಗದ ಆಕ್ರಮಣವಾಗದಂತೆ ತಕ್ಷಣ ಸಿಮೆಂಟು ಕಂಬಗಳನ್ನು ಅಳವಡಿಸಿ ತಂತಿ ಬೇಲಿ ಮಾಡುವುದಾಗಿ ತೀರ್ಮಾನಿಸಿದರು.
ಕಳಿಯ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿ 5 ಸಾವಿರ ಮೌಲ್ಯದ ಉಪಕರಣಗಳನ್ನು ವಿವರಿಸಲಾಯಿತು.ಅಂಗನವಾಡಿ ಅಭಿವೃದ್ಧಿಗೆ ಶ್ರಮ ವಹಿಸಿದ ಕೇಶವ ಪೂಜಾರಿ ನಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. ಸ್ಥಳೀಯ ವಿಧ್ಯಾಭಿಮಾನಿ ಕಲ್ಲುಕಂಬ,ತಂತಿ ಹಾಗೂ ಚರಂಡಿ, ಮೋರಿ ವ್ಯವಸ್ಥೆಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಭವಾನಿ ಲೋಕೇಶ್ ಅಧ್ಯಕ್ಷತೆ

ವಹಿಸಿದರು. ಈ ಸಂದರ್ಭದಲ್ಲಿ ಕಳಿಯ ಗ್ರಾ.ಪಂ. ಅಧ್ಯಕ್ಷ ದಿವಾಕರ ಎಮ್., ಕಳಿಯ ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಕೆ,ಸುಧಾಕರ ಮಜಲು,ಪುಷ್ಪವತಿ, ಲತೀಫ್,ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ್ಞ ಕೆ. ಮಾಜಿ ಅಧ್ಯಕ್ಷ ಕೇಶ‌ವ ಪೂಜಾರಿ ನಾಳ, ನಾಳ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ,ರಕ್ತೇಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನ್ಯಾಯತರ್ಪು ಆಶಾ ಕಾರ್ಯಕರ್ತೆ ಶಶಿಕಲಾ, ಪೂರ್ಣಿಮಾ, ಬಾಲ ವಿಕಾಸ ಸಮಿತಿ ಪದಾಧಿಕಾರಿಗಳು ಹಾಗೂ ಮಕ್ಕಳ ಪೋಷಕರು ಭಾಗವಹಿಸಿದರು. ಅಂಗನವಾಡಿ ಕಾರ್ಯಕರ್ತೆ ಸ್ವಾಗತಿಸಿ ಧನ್ಯವಾದ ವಿತ್ತರು.

Related posts

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya
error: Content is protected !!