23.4 C
ಪುತ್ತೂರು, ಬೆಳ್ತಂಗಡಿ
August 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು.

ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ವಿಟ್ಲ ಇಲ್ಲಿಯ ತೋಟಗಾರಿಕೆ ವಿಜ್ಞಾನಿ ಡಾ. ಭವಿಷ್ಯ ಇವರು ಅಡಿಕೆಯ ವಿವಿಧ ಪ್ರಚಲಿತ ತಳಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರಸಾವರಿ ಪದ್ಧತಿಗಳು, ಮುಖ್ಯ ರೋಗ ಹಾಗೂ ಕೀಟಗಳ ಹತೋಟಿ ವಿಧಾನದ ಬಗ್ಗೆ ಪೂರ್ವಾಹ್ನ ಉಪನ್ಯಾಸ ನೀಡಿದರು.

ಅಪರಾಹ್ನದ ಅವಧಿಯಲ್ಲಿ ಅಡಿಕೆಯಲ್ಲಿ ಅಂತರ ಬೆಳೆಗಳಾಗಿ ಕರಿಮೆಣಸು ಹಾಗೂ ಕೋಕೋ ಬೆಳೆಗಳ ಬಗ್ಗೆ ಪ್ರಗತಿಪರ ರೈತರಾದ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ವಿಷಯ ಮಂಡನೆ ಮಾಡಿದರು.

ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಒಟ್ಟು 53 ಜನ ರೈತ ಬಾಂಧವರು ಭಾಗವಹಿಸಿದ್ದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
error: Content is protected !!