23.4 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿ

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ


ಬೆಳ್ತಂಗಡಿ : ಕಳಿಯ ಗ್ರಾಮದ ದೇರ್ಜಾಲು ರಸ್ತೆ ಭಾರೀ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ತುಂಬಾ ಹದಗೆಟ್ಟಿದೆ. ಪಂಚಾಯತ್ ಮತ್ತು ಖಾಸಗಿ ರಸ್ತೆಯೆಂದು ಮುಸುಕಿನ ಗುದ್ದಾಟದಲ್ಲಿ ಹದಗೆಟ್ಟ ಕೆಸರಿನಲ್ಲಿ ಓಡಾಡುವುದಕ್ಕೆ ಭಾರೀ ತೊಂದರೆ ಅಗುತ್ತದೆ.

ಕೆಲವು ವರ್ಷಗಳ ಹಿಂದೆ ಗ್ರಾಮ ಪಂಚಾಯತ್ ವತಿಯಿಂದ ವರ್ಷಕ್ಕೊಮ್ಮೆ ಚರಂಡಿ ರಿಪೇರಿ ಮತ್ತು ರಸ್ತೆಯ ನಿರ್ವಹಣೆ ಆಗುತ್ತಿತ್ತು. ವರ್ಷಗಳ ನಂತರ ರಸ್ತೆಯನ್ನು ಖಾಸಗಿ ರಸ್ತೆಯಾಗಿ ಮಾಡಬೇಕೆಂದು ಕಳಿಯ ಗ್ರಾಮ ಪಂಚಾಯತ್ ಗೆ ಓರ್ವ ವ್ಯಕ್ತಿ ಹತ್ತಾರು ಮನೆಯವರ ಸಹಿ ಸಂಗ್ರಹಿಸಿ ಮನವಿಯನ್ನು ಪಂಚಾಯತ್ ಗೆ ನೀಡಿದರು ಎಂದು ತಿಳಿದು ಬಂದಿದೆ. ಆದರೂ ಮೂರ್ನಾಲ್ಕು ಮನೆಯವರು

ಸೇರಿಕೊಂಡು ಸ್ವಂತ ಖರ್ಚಿನಲ್ಲಿ ರಸ್ತೆಯ ನಿರ್ವಹಣೆ ಮಾಡಿ ಕೊಂಡು ಬಂದಿದ್ದಾರೆ. ಈಗಾಗಲೇ ಸ್ವಂತ ಖರ್ಚಿನಲ್ಲಿ 3 ಪೀಕಪ್ ಜಲ್ಲಿ ಹುಡಿ ಹಾಕಿದರೂ ಇತ್ತೀಚಿನ ಭಾರೀ ಮಳೆಯ ಅನಾಹುತಕ್ಕೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ.
ಅದುದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ,ಅನಾರೋಗ್ಯ ಬಾಧಿತರಿಗೆ ಮತ್ತು ವಾಹನ ಸಂಚಾರಕ್ಕೆ ಪದೆ,ಪದೆ ಸಮಸ್ಯೆಯಾಗುತ್ತಿದೆ.
ಪಂಚಾಯತ್ ಜನಪ್ರತಿ ನಿಧಿಗಳು, ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸ ಬೇಕು. ಹಾಗೂ ಸಾರ್ವಜನಿಕ ಹದಗೆಟ್ಟ ರಸ್ತೆ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya
error: Content is protected !!