25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿ

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ


ಬೆಳ್ತಂಗಡಿ : ಕಳಿಯ ಗ್ರಾಮದ ದೇರ್ಜಾಲು ರಸ್ತೆ ಭಾರೀ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ತುಂಬಾ ಹದಗೆಟ್ಟಿದೆ. ಪಂಚಾಯತ್ ಮತ್ತು ಖಾಸಗಿ ರಸ್ತೆಯೆಂದು ಮುಸುಕಿನ ಗುದ್ದಾಟದಲ್ಲಿ ಹದಗೆಟ್ಟ ಕೆಸರಿನಲ್ಲಿ ಓಡಾಡುವುದಕ್ಕೆ ಭಾರೀ ತೊಂದರೆ ಅಗುತ್ತದೆ.

ಕೆಲವು ವರ್ಷಗಳ ಹಿಂದೆ ಗ್ರಾಮ ಪಂಚಾಯತ್ ವತಿಯಿಂದ ವರ್ಷಕ್ಕೊಮ್ಮೆ ಚರಂಡಿ ರಿಪೇರಿ ಮತ್ತು ರಸ್ತೆಯ ನಿರ್ವಹಣೆ ಆಗುತ್ತಿತ್ತು. ವರ್ಷಗಳ ನಂತರ ರಸ್ತೆಯನ್ನು ಖಾಸಗಿ ರಸ್ತೆಯಾಗಿ ಮಾಡಬೇಕೆಂದು ಕಳಿಯ ಗ್ರಾಮ ಪಂಚಾಯತ್ ಗೆ ಓರ್ವ ವ್ಯಕ್ತಿ ಹತ್ತಾರು ಮನೆಯವರ ಸಹಿ ಸಂಗ್ರಹಿಸಿ ಮನವಿಯನ್ನು ಪಂಚಾಯತ್ ಗೆ ನೀಡಿದರು ಎಂದು ತಿಳಿದು ಬಂದಿದೆ. ಆದರೂ ಮೂರ್ನಾಲ್ಕು ಮನೆಯವರು

ಸೇರಿಕೊಂಡು ಸ್ವಂತ ಖರ್ಚಿನಲ್ಲಿ ರಸ್ತೆಯ ನಿರ್ವಹಣೆ ಮಾಡಿ ಕೊಂಡು ಬಂದಿದ್ದಾರೆ. ಈಗಾಗಲೇ ಸ್ವಂತ ಖರ್ಚಿನಲ್ಲಿ 3 ಪೀಕಪ್ ಜಲ್ಲಿ ಹುಡಿ ಹಾಕಿದರೂ ಇತ್ತೀಚಿನ ಭಾರೀ ಮಳೆಯ ಅನಾಹುತಕ್ಕೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ.
ಅದುದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ,ಅನಾರೋಗ್ಯ ಬಾಧಿತರಿಗೆ ಮತ್ತು ವಾಹನ ಸಂಚಾರಕ್ಕೆ ಪದೆ,ಪದೆ ಸಮಸ್ಯೆಯಾಗುತ್ತಿದೆ.
ಪಂಚಾಯತ್ ಜನಪ್ರತಿ ನಿಧಿಗಳು, ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸ ಬೇಕು. ಹಾಗೂ ಸಾರ್ವಜನಿಕ ಹದಗೆಟ್ಟ ರಸ್ತೆ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya
error: Content is protected !!