22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

ಉಜಿರೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸೈಬರ್ ಅಪರಾಧ ಮತ್ತು ಸುರಕ್ಷತೆ’ ಕುರಿತ ಜಾಗೃತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ರೋಟರಿ ಕ್ಲಬ್ ಹಾಗೂ ಮಂಗಳೂರಿನ ಸೈಬರ್ ಅಪರಾಧ ತಡೆ ದಳ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಸೈಬರ್, ಎಕನಾಮಿಕ್ಸ್ ಆ್ಯಂಡ್ ನಾರ್ಕೋಟಿಕ್ ಕ್ರೈಮ್ಸ್ ಪೊಲೀಸ್ ಠಾಣಾ ಡಿವೈ.ಎಸ್.ಪಿ. ಮಂಜುನಾಥ ಮಾತಾಡುತ್ತಾ ಡಾಟಾ ಎಂಟ್ರಿ ಅರೆಕಾಲಿಕ ಉದ್ಯೋಗ ಭರವಸೆ ನೀಡಿ ಹಣದ ವಂಚನೆ, ಪಾರ್ಸೆಲ್‌ನಲ್ಲಿ ಮಾದಕ ವಸ್ತು ಪತ್ತೆಯಾಗಿದೆ ಎನ್ನುತ್ತಾ ವಾಟ್ಸಾಪ್‌ ಕರೆಯಲ್ಲಿ ಪೋಲೀಸ್‌ ಸಮವಸ್ತ್ರದಲ್ಲಿ ಕಾಣಿಸಿಕೊಂಡು ಹಣಕ್ಕಾಗಿ ಪೀಡನೆ, ಯುವಕ-ಯುವತಿಯರ ಫೋಟೊಗಳನ್ನು ಡಿ.ಪಿ., ಫೇಸ್ಬುಕ್‌ಗಳಿಂದ ಸಂಗ್ರಹಿಸಿ ಅಶ್ಲೀಲವಾಗಿ ಬಳಸಿಕೊಳ್ಳುವ ಬೆದರಿಕೆಯೊಂದಿಗೆ ಸತತವಾಗಿ ಹಣ ಕೀಳುವಂತಹ ಅನೇಕ ವಂಚನೆಯ ಜಾಲಗಳು ಸಕ್ರಿಯವಾಗಿದ್ದು ಅದಕ್ಕೆ ಪ್ರತಿಯಾಗಿ ಜನರು ಜಾಗ್ರತರಾಬೇಕು. ಅಗತ್ಯ ಕಂಡುಬಂದಲ್ಲಿ ಸಮಯ ವ್ಯರ್ಥಮಾಡದೆ ಪೊಲೀಸ್‌ಠಾಣೆಯನ್ನು ಅಥವಾ ೧೯೩೦ ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳುವಳಿಕೆ ನೀಡಿದರು.ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತ ವಿಭಾಗದ ಸಿಇಒ ಪೂರನ್ ವರ್ಮ, ರೋಟರಿ ಕಾರ್ಯದರ್ಶಿ ರೊ. ಸಂದೇಶ್‌, ಬಂದರು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಂಜುನಾಥ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಅಶೋಕ್‌ಕುಮಾರ್‌ ಸ್ವಾಗತಿಸಿ, ವಂದಿಸಿದರು.ಡಾ.ಅಶೋಕ್‌ಕುಮಾರ್‌ಪ್ರಾಂಶುಪಾಲರು, ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜು

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!