28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ : ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು ರಾಜಧಾನಿಯಲ್ಲಿ ಅಕ್ರಮ ಮಾಂಸ ಸರಬರಾಜು ಆದದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿ ಮಾಡಿದ ರಾಷ್ಟ್ರ ರಕ್ಷಣೆ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಎಸ್. ಪಿ. ಚಂದನ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಹಾಗೂ ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ/ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಹಾಗಾಗಿ ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ತಡೆಯಲು ವಿವಿಧ ಮಾಧ್ಯಮಗಳ ಮೂಲಕ ಜನಜಾಗೃತಿ ಮೂಡಿಸುವುದು ಅಪೇಕ್ಷಿತವಿದೆ. ಹಾಗಾಗಿ ಇವೆಲ್ಲವುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿಯ ಉಪ ತಹಶೀಲ್ದಾರರಾದ ಸೌ. ಜಯ. ಕೆ ರವರಿಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಉದಯ ಬಿ.ಕೆ ನ್ಯಾಯವಾದಿ ಬೆಳ್ತಂಗಡಿ , ಜಯ ಸಾಲಿಯಾನ್ ಧರ್ಮದರ್ಶಿಗಳು ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಲೆಂಜ, ತಿಮ್ಮಪ್ಪ ಗೌಡ ಬೆಳಾಲು ಉಪಾಧ್ಯಕ್ಷರು ವಿಶ್ವಹಿಂದ್ ಪರಿಷತ್ ಸಂಘಟಕರು ಪುತ್ತೂರು, ಬಾಲಕೃಷ್ಣ ಗೌಡ ಸಂಚಾಲಕರು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೇಖ್ಯಾ, ವಿಘ್ನೇಶ್ ಆಚಾರ್ಯ ವಿಶ್ವಹಿಂದ್ ಪರಿಷತ್ ನಗರ ಪ್ರಮುಖ್ ಬೆಳ್ತಂಗಡಿ, ವಸಂತ ಬಂಗೇರ ಉಜಿರೆ, ಸದಾಶಿವ ಶೆಟ್ಟಿ ಅಳದಂಗಡಿ, ದಿನೇಶ್ ನಡ, ಪ್ರಸನ್ನ ಬೆಳ್ತಂಗಡಿ, ಹರೀಶ್, ದಾಮೋದರ್ ಪಟ್ಟೂರು, ಯೋಗೀಶ್ ಕೆಂಬರ್ಜೆ ಮತ್ತಿತರರು ಉಪಸ್ಥಿತರಿದ್ದರು.

Related posts

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya
error: Content is protected !!