25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಇಂದಬೆಟ್ಟು ಗ್ರಾಮ ಪಂಚಾಯತಿನ 2024-2025 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಇಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ರವರು ನಡೆಸಿಕೊಟ್ಟರು.

ದೇವನಾರಿ ಶಾಲಾ ಮಕ್ಕಳು ನಾಡಗೀತೆ ಹಾಡಿದರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ, ನಿಕಟಪೂರ್ವ ಅಧ್ಯಕ್ಷರಾದ ಅನಂದ ಅಡಿಲು, ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು, ವೀರಪ್ಪ ಮೊಯ್ಲಿ, ಸುಮಿತ್ರಾ, ಹರಿಣಾಕ್ಷಿ, ಸೌಮ್ಯ, ಜಯಂತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಗ್ರಾಮದ ಅಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಜಮಾ ಖರ್ಚಿನ ವಿವರ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸ್ವಾಗತಿಸಿ ವರದಿ ಮಂಡಿಸಿದರು. ರಾಷ್ಟ್ರಗೀತೆ ಯೊಂದಿಗೆ ಗ್ರಾಮ ಸಭೆಯನ್ನು ಮುಕ್ತಾಯಗೊಂಡಿತ್ತು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!