May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

ಕುವೆಟ್ಟು : ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯವಾದ ಘಟನೆ ಆ.5ರಂದು ರಾತ್ರಿ ನಡೆದಿದೆ.

ಘಟನೆ ವಿವರ: ಬಾಗಲಕೋಟೆ ತೆಗ್ಗಿ ಗ್ರಾಮದ ನಿವಾಸಿ ಪತ್ತಾರ ನಾಗಲಿಂಗ ರವರ ದೂರಿನಂತೆ ಆ.5 ರಂದು ಎಕ್ಸೆಲ್‌ ಕಾಲೇಜು ಕಡೆಯಿಂದ ಶಕ್ತಿನಗರ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿರುವ ಸಮಯ ರಾತ್ರಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಶಕ್ತಿನಗರದ ಅರೆಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ ಗುರುವಾಯನಕೆರೆ ಕಡೆಯಿಂದ ವೇಣೂರು ಕಡೆಗೆ ಕೆಎ 70 ಜೆ 4016 ನೇ ಮೋಟಾರು ಸೈಕಲ್‌ ಸವಾರ ಅತೀ ವೇಗದ ದುಡುಕುತನದಿಂದ ಚಲಾಯಿಸಿಕೊಂಡು ಬಂದು ನಾಗಲಿಂಗ ರವರಿಗೆ ಢಿಕ್ಕಿ ಹೊಡೆದ ಪರಿಣಾಮ ಕೈ ಕಾಲುಗಳಿಗೆ ರಕ್ತಗಾಯ, ಹಾಗೂ ಮೋಟಾರು ಸೈಕಲ್‌ ಸವಾರ ವಿನ್ಯಾಸ್‌ ರವರಿಗೂ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ: 84/2024 ಕಲಂ: 281, 125 (ಎ) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!