26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!