27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!