May 6, 2026
ತಾಲೂಕು ಸುದ್ದಿ

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

ಬೆಳ್ತಂಗಡಿ : . ನಾಳ ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ ಹಾಗೂ ಪೋಷಕರ ಸಭೆ ಆ.6.ರಂದು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ನಾಳ ಅಂಗನವಾಡಿ ಕೇಂದ್ರ 42 ಹಿಂದೆ ಪ್ರಾರಂಭವಾಗಿದ್ದು,. 38 ವರ್ಷಗಳ ಹಿಂದೆ ನಿರ್ಮಾಣವಾದ ಕಟ್ಟಡ ಶಿಥಿಲವಾಗಿದೆ.ನೂತನ ಕಟ್ಟಡ ರಚನೆ ಆಗಬೇಕೆಂದು ಪೋಷಕರು ಬಾಲ ವಿಕಾಸ ಸಮಿತಿಯವರು ಒತ್ತಾಯಿಸಿದರು. ಈಗಾಗಲೇ ಅಂಗನವಾಡಿ ಕೇಂದ್ರ ವಠಾರದಲ್ಲಿದ್ದ ಅಪಾಯಕಾರಿ ಮರಗಳನ್ನು ತೆರವು ಗೊಳಿಸಿದ್ದಾರೆ.

ಅಂಗನವಾಡಿ ಕೇಂದ್ರಕ್ಕೆ ಮೀಸಲಾದ 0.15 ಸೆಂಟ್ಸ್ ಜಾಗದ ಆಕ್ರಮಣವಾಗದಂತೆ ತಕ್ಷಣ ಸಿಮೆಂಟು ಕಂಬಗಳನ್ನು ಅಳವಡಿಸಿ ತಂತಿ ಬೇಲಿ ಮಾಡುವುದಾಗಿ ತೀರ್ಮಾನಿಸಿದರು.
ಕಳಿಯ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿ 5 ಸಾವಿರ ಮೌಲ್ಯದ ಉಪಕರಣಗಳನ್ನು ವಿವರಿಸಲಾಯಿತು.ಅಂಗನವಾಡಿ ಅಭಿವೃದ್ಧಿಗೆ ಶ್ರಮ ವಹಿಸಿದ ಕೇಶವ ಪೂಜಾರಿ ನಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. ಸ್ಥಳೀಯ ವಿಧ್ಯಾಭಿಮಾನಿ ಕಲ್ಲುಕಂಬ,ತಂತಿ ಹಾಗೂ ಚರಂಡಿ, ಮೋರಿ ವ್ಯವಸ್ಥೆಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಭವಾನಿ ಲೋಕೇಶ್ ಅಧ್ಯಕ್ಷತೆ

ವಹಿಸಿದರು. ಈ ಸಂದರ್ಭದಲ್ಲಿ ಕಳಿಯ ಗ್ರಾ.ಪಂ. ಅಧ್ಯಕ್ಷ ದಿವಾಕರ ಎಮ್., ಕಳಿಯ ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಕೆ,ಸುಧಾಕರ ಮಜಲು,ಪುಷ್ಪವತಿ, ಲತೀಫ್,ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ್ಞ ಕೆ. ಮಾಜಿ ಅಧ್ಯಕ್ಷ ಕೇಶ‌ವ ಪೂಜಾರಿ ನಾಳ, ನಾಳ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ,ರಕ್ತೇಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನ್ಯಾಯತರ್ಪು ಆಶಾ ಕಾರ್ಯಕರ್ತೆ ಶಶಿಕಲಾ, ಪೂರ್ಣಿಮಾ, ಬಾಲ ವಿಕಾಸ ಸಮಿತಿ ಪದಾಧಿಕಾರಿಗಳು ಹಾಗೂ ಮಕ್ಕಳ ಪೋಷಕರು ಭಾಗವಹಿಸಿದರು. ಅಂಗನವಾಡಿ ಕಾರ್ಯಕರ್ತೆ ಸ್ವಾಗತಿಸಿ ಧನ್ಯವಾದ ವಿತ್ತರು.

Related posts

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya
error: Content is protected !!