24 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು.

ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ವಿಟ್ಲ ಇಲ್ಲಿಯ ತೋಟಗಾರಿಕೆ ವಿಜ್ಞಾನಿ ಡಾ. ಭವಿಷ್ಯ ಇವರು ಅಡಿಕೆಯ ವಿವಿಧ ಪ್ರಚಲಿತ ತಳಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರಸಾವರಿ ಪದ್ಧತಿಗಳು, ಮುಖ್ಯ ರೋಗ ಹಾಗೂ ಕೀಟಗಳ ಹತೋಟಿ ವಿಧಾನದ ಬಗ್ಗೆ ಪೂರ್ವಾಹ್ನ ಉಪನ್ಯಾಸ ನೀಡಿದರು.

ಅಪರಾಹ್ನದ ಅವಧಿಯಲ್ಲಿ ಅಡಿಕೆಯಲ್ಲಿ ಅಂತರ ಬೆಳೆಗಳಾಗಿ ಕರಿಮೆಣಸು ಹಾಗೂ ಕೋಕೋ ಬೆಳೆಗಳ ಬಗ್ಗೆ ಪ್ರಗತಿಪರ ರೈತರಾದ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ವಿಷಯ ಮಂಡನೆ ಮಾಡಿದರು.

ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಒಟ್ಟು 53 ಜನ ರೈತ ಬಾಂಧವರು ಭಾಗವಹಿಸಿದ್ದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya
error: Content is protected !!