28 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ. 7 ರಂದು ಶಾಲಾ ಮಟ್ಟದ ಪ್ರತಿಭಾ ಕಾರಂಜಿಯು ನಡೆಯಿತು.

ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀಮತಿ ಬೆನೆಡಿಕ್ಟ ಡಿಸಿಲ್ವರವರು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಶಿಕ್ಷಕರು ಮತ್ತು ಪೋಷಕರ ಪ್ರೋತ್ಸಾಹದೊಂದಿಗೆ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕೆಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಶಾಲಾ ಸಂಚಾಲಕರು ಅತೀ ವಂ ಫಾ ವಾಲ್ಟರ್ ಓಸ್ವಲ್ಡ್ ಡಿಮೆಲ್ಲೋ ರವರು ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಬಾಚಿಕೊಂಡು ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ಪರ್ಧೆಗಳ ನಿಯಮಗಳನ್ನು ತಿಳಿಸಿದರು.

ತೀರ್ಪುಗಾರರಾದ ಸುರೇಶ್ ಎ ಡಿ, ಶ್ರೀಮತಿ ನಿಶಾ ಭಟ್, ಮಂಜುನಾಥ್, ಬ್ರದರ್ ಆಲ್ರಿಕ್ ಗ್ಸೇವಿಯರ್, ಅಶ್ರಫ್ ಉಪಸ್ಥಿತರಿದ್ದರು. ಕಿರಿಯ, ಹಿರಿಯ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ವಿದ್ಯಾರ್ಥಿಗಳಾದ ವೀವನ್ ಪಿಂಟೋ ಸ್ವಾಗತಿಸಿ, ಪೃಥ್ವಿ ಪಿ ವಿ ವಂದಿಸಿದರು. ಆಲ್ಸ್ಟನ್ ಡಿಸಿಲ್ವ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿಯರಾದ ವಿನಿತಾ ಮೋರ‌ಸ್, ಶ್ರೀಮತಿ ಲೋನ ಲೋಬೋ, ಶ್ರೀಮತಿ ಸುಮಿತ್ರ ಬಿ. ಎಲ್ ಸಹಕರಿಸಿದರು.

Related posts

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya
error: Content is protected !!