May 6, 2026
ಗ್ರಾಮಾಂತರ ಸುದ್ದಿ

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ


ಬೆಳ್ತಂಗಡಿ : ಕಳಿಯ ಗ್ರಾಮದ ದೇರ್ಜಾಲು ರಸ್ತೆ ಭಾರೀ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ತುಂಬಾ ಹದಗೆಟ್ಟಿದೆ. ಪಂಚಾಯತ್ ಮತ್ತು ಖಾಸಗಿ ರಸ್ತೆಯೆಂದು ಮುಸುಕಿನ ಗುದ್ದಾಟದಲ್ಲಿ ಹದಗೆಟ್ಟ ಕೆಸರಿನಲ್ಲಿ ಓಡಾಡುವುದಕ್ಕೆ ಭಾರೀ ತೊಂದರೆ ಅಗುತ್ತದೆ.

ಕೆಲವು ವರ್ಷಗಳ ಹಿಂದೆ ಗ್ರಾಮ ಪಂಚಾಯತ್ ವತಿಯಿಂದ ವರ್ಷಕ್ಕೊಮ್ಮೆ ಚರಂಡಿ ರಿಪೇರಿ ಮತ್ತು ರಸ್ತೆಯ ನಿರ್ವಹಣೆ ಆಗುತ್ತಿತ್ತು. ವರ್ಷಗಳ ನಂತರ ರಸ್ತೆಯನ್ನು ಖಾಸಗಿ ರಸ್ತೆಯಾಗಿ ಮಾಡಬೇಕೆಂದು ಕಳಿಯ ಗ್ರಾಮ ಪಂಚಾಯತ್ ಗೆ ಓರ್ವ ವ್ಯಕ್ತಿ ಹತ್ತಾರು ಮನೆಯವರ ಸಹಿ ಸಂಗ್ರಹಿಸಿ ಮನವಿಯನ್ನು ಪಂಚಾಯತ್ ಗೆ ನೀಡಿದರು ಎಂದು ತಿಳಿದು ಬಂದಿದೆ. ಆದರೂ ಮೂರ್ನಾಲ್ಕು ಮನೆಯವರು

ಸೇರಿಕೊಂಡು ಸ್ವಂತ ಖರ್ಚಿನಲ್ಲಿ ರಸ್ತೆಯ ನಿರ್ವಹಣೆ ಮಾಡಿ ಕೊಂಡು ಬಂದಿದ್ದಾರೆ. ಈಗಾಗಲೇ ಸ್ವಂತ ಖರ್ಚಿನಲ್ಲಿ 3 ಪೀಕಪ್ ಜಲ್ಲಿ ಹುಡಿ ಹಾಕಿದರೂ ಇತ್ತೀಚಿನ ಭಾರೀ ಮಳೆಯ ಅನಾಹುತಕ್ಕೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ.
ಅದುದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ,ಅನಾರೋಗ್ಯ ಬಾಧಿತರಿಗೆ ಮತ್ತು ವಾಹನ ಸಂಚಾರಕ್ಕೆ ಪದೆ,ಪದೆ ಸಮಸ್ಯೆಯಾಗುತ್ತಿದೆ.
ಪಂಚಾಯತ್ ಜನಪ್ರತಿ ನಿಧಿಗಳು, ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸ ಬೇಕು. ಹಾಗೂ ಸಾರ್ವಜನಿಕ ಹದಗೆಟ್ಟ ರಸ್ತೆ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!