ಬೆಳ್ತಂಗಡಿ : ಕಳಿಯ ಗ್ರಾಮದ ದೇರ್ಜಾಲು ರಸ್ತೆ ಭಾರೀ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ತುಂಬಾ ಹದಗೆಟ್ಟಿದೆ. ಪಂಚಾಯತ್ ಮತ್ತು ಖಾಸಗಿ ರಸ್ತೆಯೆಂದು ಮುಸುಕಿನ ಗುದ್ದಾಟದಲ್ಲಿ ಹದಗೆಟ್ಟ ಕೆಸರಿನಲ್ಲಿ ಓಡಾಡುವುದಕ್ಕೆ ಭಾರೀ ತೊಂದರೆ ಅಗುತ್ತದೆ.

ಕೆಲವು ವರ್ಷಗಳ ಹಿಂದೆ ಗ್ರಾಮ ಪಂಚಾಯತ್ ವತಿಯಿಂದ ವರ್ಷಕ್ಕೊಮ್ಮೆ ಚರಂಡಿ ರಿಪೇರಿ ಮತ್ತು ರಸ್ತೆಯ ನಿರ್ವಹಣೆ ಆಗುತ್ತಿತ್ತು. ವರ್ಷಗಳ ನಂತರ ರಸ್ತೆಯನ್ನು ಖಾಸಗಿ ರಸ್ತೆಯಾಗಿ ಮಾಡಬೇಕೆಂದು ಕಳಿಯ ಗ್ರಾಮ ಪಂಚಾಯತ್ ಗೆ ಓರ್ವ ವ್ಯಕ್ತಿ ಹತ್ತಾರು ಮನೆಯವರ ಸಹಿ ಸಂಗ್ರಹಿಸಿ ಮನವಿಯನ್ನು ಪಂಚಾಯತ್ ಗೆ ನೀಡಿದರು ಎಂದು ತಿಳಿದು ಬಂದಿದೆ. ಆದರೂ ಮೂರ್ನಾಲ್ಕು ಮನೆಯವರು

ಸೇರಿಕೊಂಡು ಸ್ವಂತ ಖರ್ಚಿನಲ್ಲಿ ರಸ್ತೆಯ ನಿರ್ವಹಣೆ ಮಾಡಿ ಕೊಂಡು ಬಂದಿದ್ದಾರೆ. ಈಗಾಗಲೇ ಸ್ವಂತ ಖರ್ಚಿನಲ್ಲಿ 3 ಪೀಕಪ್ ಜಲ್ಲಿ ಹುಡಿ ಹಾಕಿದರೂ ಇತ್ತೀಚಿನ ಭಾರೀ ಮಳೆಯ ಅನಾಹುತಕ್ಕೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ.
ಅದುದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ,ಅನಾರೋಗ್ಯ ಬಾಧಿತರಿಗೆ ಮತ್ತು ವಾಹನ ಸಂಚಾರಕ್ಕೆ ಪದೆ,ಪದೆ ಸಮಸ್ಯೆಯಾಗುತ್ತಿದೆ.
ಪಂಚಾಯತ್ ಜನಪ್ರತಿ ನಿಧಿಗಳು, ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸ ಬೇಕು. ಹಾಗೂ ಸಾರ್ವಜನಿಕ ಹದಗೆಟ್ಟ ರಸ್ತೆ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.













