24.7 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

ಬೆಳ್ತಂಗಡಿ: ಆ.8ರಂದು ನಡೆದ ಶ್ರಮದಾನವು ಯಶಸ್ವಿಯಾಗಿದ್ದು ಸಾರ್ವಜನಿಕರಿಂದ ಪ್ರಶಂಸೆಗಳ ಮಹಾಪೂರವೇ ಹರಿದು ಬಂತು. ಅಲ್ಲಲ್ಲಿ ಉಂಟಾದ ದೊಡ್ಡ ದೊಡ್ಡ ಗಾತ್ರದ ಗುಂಡಿಗಳನ್ನು ಕಲ್ಲು ಮತ್ತು ಜಲ್ಲಿಗಳನ್ನು ಹಾಕಿ ಮುಚ್ಚಲಾಯಿತು. ತಾತ್ಕಾಲಿಕವಾಗಿ ಸಂಚಾರಕ್ಕೆ ಯೋಗ್ಯವೆನಿಸುವಂತಹ ಕಾಮಗಾರಿ ಮಾಡಿದ್ದು ಇದು ಮುಖ್ಯವಾಗಿ ಶಾಲಾ ಮಕ್ಕಳಿಗೆ ಪ್ರಯೋಜನವಾಗಲೆಂದು ಹಮ್ಮಿಕೊಂಡಿರುವ ಶ್ರಮದಾನವು ಆ ಎಲ್ಲಾ ವಾಹನ ಮಾಲಕರಿಗೆ ಮತ್ತು ಚಾಲಕರಿಗೆ ತಕ್ಕಮಟ್ಟಿಗೆ ನಿಟ್ಟುಸಿರು ಬಿಡುವಂತಾಯಿತು.

ಸುಮಾರು ನೂರಕ್ಕೂ ಮಿಕ್ಕಿ ಯುವಕ ಯುವತಿಯರು ಈ ಶ್ರಮದಾನದಲ್ಲಿ ಪಾಲ್ಗೊಂಡಿದ್ದು ಪ್ರಮುಖ ಸಂಘಟನೆಗಳ ಮುಖ್ಯಸ್ಥರು ಪದಾಧಿಕಾರಿಗಳೊಂದಿಗೆ ಹಾಜರಿದ್ದರು. ಹಿರಿಯ ವರ್ತಕರಾದ ವಿಷ್ಣು ದಾಸ್ ಬಾಳಿಗ ರವರು ಹಾರೆಯೊಂದಿಗೆ ಬಂದು ಅವ್ಯವಸ್ಥೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.ಮತ್ತು ರೂಪಾಯಿ ಒಂದು ಸಾವಿರ ವನ್ನು ನೀಡಿ ಒಂದು ಪಿಕ್ ಅಪ್ ಜಲ್ಲಿ ತನ್ನದೆಂದು ತಿಳಿಸಿ ಸಹಕರಿಸಿದರು. ಅದರಂತೆ ಮಡಂತ್ಯಾರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಪಾತಿಲ ರೂ 500 , ರಾಜಶೇಖರ ಶೆಟ್ಟಿ 500 ವಾಹನ ಮಾಲಕರು ರೂ 100 ರಂತೆ ಇಬ್ಬರು ನೀಡಿ ಸಹಕರಿಸಿದರು.

ಸರಕಾರದಲ್ಲಿ ಹಣದ ಕೊರತೆಯಿರುವುದನ್ನು ಗಮನಿಸಿ ಸಾರ್ವಜನಿಕರಲ್ಲಿ ಒಂದು ರೂಪಾಯಿಯಾದರೂ ನೀಡಿ ಎಂದು ಬಟ್ಟೆ ಹಾಕಿ ಶೇಖರಣೆ ಮಾಡಲಾಯಿತು. ಸಾಂಕೇತಿಕವಾಗಿ ಶೇಖರಣೆಯಾದ ಮೊತ್ತವನ್ನು ತಹಶೀಲ್ದಾರರ ಮುಖಾಂತರ ಸರಕಾರಕ್ಕೆ ಪಾವತಿಸುವುದಾಗಿ ನಿರ್ಣಯಿಸಲಾಗಿದೆ.ಈ ಸಂದರ್ಭದಲ್ಲಿ ಭಾಗವಹಿಸಿದ ಎಲ್ಲಾ ಸಾರ್ವಜನಿಕ ಬಂಧುಗಳಿಗೆ ಸಂಘಟನೆಯ ಮುಖ್ಯಸ್ಥರಿಗೆ ಪದಾಧಿಕಾರಿಗಳಿಗೆ ವಂದನೆಗಳನ್ನು ಸಲ್ಲಿಸಲಾಯಿತು. ಅದೇ ರೀತಿ ಪುಂಜಾಲಕಟ್ಟೆ ಆರಕ್ಷಕ ಠಾಣೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ, ಉಪಹಾರ ವ್ಯವಸ್ಥೆ ಮಾಡಿದ ಶ್ರೀ ವಿಜಯ ಚಂದ್ರ ಮಾಲಾಡಿಯವರಿಗೆ, ಕೃತಜ್ಞತೆ ಸಲ್ಲಿಸಲಾಯಿತು.

Related posts

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!