ಬೆಳ್ತಂಗಡಿ: ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆ ಸಂಚಾರಕ್ಕೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.

ಈ ವೇಳೆ ಆಟೋ ಚಾಲಕರು ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಮಾಡಿದರು.
ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಭಾಗವಹಿಸಿ ಸಂಚಾರ ಯೋಗ್ಯ ರಸ್ತೆಯನ್ನು ಮಾಡಲು ಸಹಕರಿಸಿದರು.













