23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

ಉಜಿರೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸೈಬರ್ ಅಪರಾಧ ಮತ್ತು ಸುರಕ್ಷತೆ’ ಕುರಿತ ಜಾಗೃತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ರೋಟರಿ ಕ್ಲಬ್ ಹಾಗೂ ಮಂಗಳೂರಿನ ಸೈಬರ್ ಅಪರಾಧ ತಡೆ ದಳ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಸೈಬರ್, ಎಕನಾಮಿಕ್ಸ್ ಆ್ಯಂಡ್ ನಾರ್ಕೋಟಿಕ್ ಕ್ರೈಮ್ಸ್ ಪೊಲೀಸ್ ಠಾಣಾ ಡಿವೈ.ಎಸ್.ಪಿ. ಮಂಜುನಾಥ ಮಾತಾಡುತ್ತಾ ಡಾಟಾ ಎಂಟ್ರಿ ಅರೆಕಾಲಿಕ ಉದ್ಯೋಗ ಭರವಸೆ ನೀಡಿ ಹಣದ ವಂಚನೆ, ಪಾರ್ಸೆಲ್‌ನಲ್ಲಿ ಮಾದಕ ವಸ್ತು ಪತ್ತೆಯಾಗಿದೆ ಎನ್ನುತ್ತಾ ವಾಟ್ಸಾಪ್‌ ಕರೆಯಲ್ಲಿ ಪೋಲೀಸ್‌ ಸಮವಸ್ತ್ರದಲ್ಲಿ ಕಾಣಿಸಿಕೊಂಡು ಹಣಕ್ಕಾಗಿ ಪೀಡನೆ, ಯುವಕ-ಯುವತಿಯರ ಫೋಟೊಗಳನ್ನು ಡಿ.ಪಿ., ಫೇಸ್ಬುಕ್‌ಗಳಿಂದ ಸಂಗ್ರಹಿಸಿ ಅಶ್ಲೀಲವಾಗಿ ಬಳಸಿಕೊಳ್ಳುವ ಬೆದರಿಕೆಯೊಂದಿಗೆ ಸತತವಾಗಿ ಹಣ ಕೀಳುವಂತಹ ಅನೇಕ ವಂಚನೆಯ ಜಾಲಗಳು ಸಕ್ರಿಯವಾಗಿದ್ದು ಅದಕ್ಕೆ ಪ್ರತಿಯಾಗಿ ಜನರು ಜಾಗ್ರತರಾಬೇಕು. ಅಗತ್ಯ ಕಂಡುಬಂದಲ್ಲಿ ಸಮಯ ವ್ಯರ್ಥಮಾಡದೆ ಪೊಲೀಸ್‌ಠಾಣೆಯನ್ನು ಅಥವಾ ೧೯೩೦ ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳುವಳಿಕೆ ನೀಡಿದರು.ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತ ವಿಭಾಗದ ಸಿಇಒ ಪೂರನ್ ವರ್ಮ, ರೋಟರಿ ಕಾರ್ಯದರ್ಶಿ ರೊ. ಸಂದೇಶ್‌, ಬಂದರು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಂಜುನಾಥ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಅಶೋಕ್‌ಕುಮಾರ್‌ ಸ್ವಾಗತಿಸಿ, ವಂದಿಸಿದರು.ಡಾ.ಅಶೋಕ್‌ಕುಮಾರ್‌ಪ್ರಾಂಶುಪಾಲರು, ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜು

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!