25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ : ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು ರಾಜಧಾನಿಯಲ್ಲಿ ಅಕ್ರಮ ಮಾಂಸ ಸರಬರಾಜು ಆದದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿ ಮಾಡಿದ ರಾಷ್ಟ್ರ ರಕ್ಷಣೆ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಎಸ್. ಪಿ. ಚಂದನ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಹಾಗೂ ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ/ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಹಾಗಾಗಿ ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ತಡೆಯಲು ವಿವಿಧ ಮಾಧ್ಯಮಗಳ ಮೂಲಕ ಜನಜಾಗೃತಿ ಮೂಡಿಸುವುದು ಅಪೇಕ್ಷಿತವಿದೆ. ಹಾಗಾಗಿ ಇವೆಲ್ಲವುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿಯ ಉಪ ತಹಶೀಲ್ದಾರರಾದ ಸೌ. ಜಯ. ಕೆ ರವರಿಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಉದಯ ಬಿ.ಕೆ ನ್ಯಾಯವಾದಿ ಬೆಳ್ತಂಗಡಿ , ಜಯ ಸಾಲಿಯಾನ್ ಧರ್ಮದರ್ಶಿಗಳು ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಲೆಂಜ, ತಿಮ್ಮಪ್ಪ ಗೌಡ ಬೆಳಾಲು ಉಪಾಧ್ಯಕ್ಷರು ವಿಶ್ವಹಿಂದ್ ಪರಿಷತ್ ಸಂಘಟಕರು ಪುತ್ತೂರು, ಬಾಲಕೃಷ್ಣ ಗೌಡ ಸಂಚಾಲಕರು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೇಖ್ಯಾ, ವಿಘ್ನೇಶ್ ಆಚಾರ್ಯ ವಿಶ್ವಹಿಂದ್ ಪರಿಷತ್ ನಗರ ಪ್ರಮುಖ್ ಬೆಳ್ತಂಗಡಿ, ವಸಂತ ಬಂಗೇರ ಉಜಿರೆ, ಸದಾಶಿವ ಶೆಟ್ಟಿ ಅಳದಂಗಡಿ, ದಿನೇಶ್ ನಡ, ಪ್ರಸನ್ನ ಬೆಳ್ತಂಗಡಿ, ಹರೀಶ್, ದಾಮೋದರ್ ಪಟ್ಟೂರು, ಯೋಗೀಶ್ ಕೆಂಬರ್ಜೆ ಮತ್ತಿತರರು ಉಪಸ್ಥಿತರಿದ್ದರು.

Related posts

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನಕ್ಕೆ ಜಿ.ಪಂ. ಮಾಜಿ ಸದಸ್ಯ ಹಾಗೂ ಪಂಚಗ್ಯಾರಂಟಿ ಜಿಲ್ಲಾ ಸಮಿತಿಯ ಸದಸ್ಯ ಶೇಖರ ಕುಕ್ಕೇಡಿ ರಾಜೀನಾಮೆ

Suddi Udaya
error: Content is protected !!