25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು ಸಿಕ್ಕೇ ಸಿಗುತ್ತದೆ ‘ ಎಂದು ಮೂಡುಬಿದಿರೆಯ ನ್ಯಾಯವಾದಿ ಹಾಗೂ ನೋಟರಿ ಶ್ವೇತಾ ಜೈನ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಲವು ಸಾಧಕರ ಉದಾಹರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಗುರುತು ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ತರಗತಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ‘ನಾಯಕನಾದವನು ಮೊದಲು ತಾನು ಉತ್ತಮ ಶಿಸ್ತು ಮತ್ತು ವ್ಯಕ್ತಿತ್ವವನ್ನು ಹೊಂದಿ ಇತರರಿಗೆ ಪ್ರೇರಣೆಯಾಗಬೇಕು ‘ ಎಂದು ಹೇಳಿದರು.

ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಕೋರಿದರು.ವಿದ್ಯಾರ್ಥಿನಿ ಆತ್ಮಿ ಅವರು ಪರಿಚಯ ಮಾಡಿದರು. ಅನುಶ್ರೀ ನಿರೂಪಿಸಿ , ಯುಕ್ತಾ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!