23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು ಸಿಕ್ಕೇ ಸಿಗುತ್ತದೆ ‘ ಎಂದು ಮೂಡುಬಿದಿರೆಯ ನ್ಯಾಯವಾದಿ ಹಾಗೂ ನೋಟರಿ ಶ್ವೇತಾ ಜೈನ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಲವು ಸಾಧಕರ ಉದಾಹರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಗುರುತು ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ತರಗತಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ‘ನಾಯಕನಾದವನು ಮೊದಲು ತಾನು ಉತ್ತಮ ಶಿಸ್ತು ಮತ್ತು ವ್ಯಕ್ತಿತ್ವವನ್ನು ಹೊಂದಿ ಇತರರಿಗೆ ಪ್ರೇರಣೆಯಾಗಬೇಕು ‘ ಎಂದು ಹೇಳಿದರು.

ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಕೋರಿದರು.ವಿದ್ಯಾರ್ಥಿನಿ ಆತ್ಮಿ ಅವರು ಪರಿಚಯ ಮಾಡಿದರು. ಅನುಶ್ರೀ ನಿರೂಪಿಸಿ , ಯುಕ್ತಾ ವಂದಿಸಿದರು.

Related posts

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya
error: Content is protected !!