ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್ ಆಗಿದ್ದು ಆ ಬಳಿಕ ಎರಡೂ ಕಡೆ ಸಾಗುವ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಉಜಿರೆ ಹಾಗೂ ಬೆಳ್ತಂಗಡಿ ಕಡೆ ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಈ ಮಧ್ಯೆ ಬಂದ ಆ್ಯಂಬುಲೆನ್ಸ್ ಟ್ರಾಫಿಕ್‌ನಲ್ಲಿ ಪರದಾಡಿದೆ.

ಉಜಿರೆಯಿಂದ ಬಂದ ಖಾಸಗಿ ಬಸ್ಸೆಂದು ಕಾಶಿಬೆಟ್ಟು ಬಸ್‌ ಸ್ಟಾಪ್ ನಲ್ಲಿದ್ದ ಸ್ವಲ್ಪ ಜಾಗದಲ್ಲೆ ತಿರುವು ಪಡೆದುಕೊಂಡು ವಾಪಾಸ್ಸಾಗಿದೆ.

ಕಾಶಿಬೆಟ್ಟುವಿನಲ್ಲಿ ರಸ್ತೆ ತೀರ ಕೆಟ್ಟು ಹೋಗಿದ್ದು ಭಾರೀ ಹೊಂಡ ನಿರ್ಮಾಣವಾಗಿದೆ. ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!