July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಗೋಪಾಲ ಶಾಸ್ತ್ರಿ ನಿಧನ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya
error: Content is protected !!