September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ ಪೋಷಕಾಂಶ ಸಮೃದ್ಧ ತಳಿಗಳು ಬಿಡುಗಡೆಗೊಳ್ಳಲಿವೆ.

ಇದರಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ಸೇರಿವೆ.

ನೇತ್ರಾ ಜಂಬೋ-1 ತಳಿಯನ್ನು ಈಗಿನ ನಿರ್ದೇಶಕ ಡಾ|| ದಿನಕರ ಅಡಿಗ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಈ ತಳಿ ಕೂಲಿ ಖರ್ಚನ್ನು ಗಮನಾರ್ಹ ಪ್ರಮಾಣದಲ್ಲಿ ಉಳಿಸುತ್ತದೆ. ಇದರಲ್ಲಿ 12 ಗ್ರಾಂ ತೂಕದ ಬೀಜಗಳಿರುತ್ತವೆ. ಶೇ. 90ಕ್ಕೂ ಹೆಚ್ಚಿನ ಬೀಜಗಳದ್ದು 5 ಒಂದೇ ಗಾತ್ರ. ನೂರು ಕೆಜಿ ಬೀಜ

ಸಂಸ್ಕರಣೆಯಿಂದ 29ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್ (ಡಬ್ಲ್ಯೂ130) ಈ ತಳಿಯ ತಿರುಳಿನದ್ದು.

ನೇತ್ರಾ ಗಂಗಾ ತಳಿಯನ್ನು ಹಿಂದಿನ ಪ್ರಭಾರ ನಿರ್ದೇಶಕ ಡಾ| ಗಂಗಾಧರ ನಾಯಕ್ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಇದು ದೊಡ್ಡ ಗಾತ್ರದ ಬೀಜವನ್ನು (12 ರಿಂದ 13 ಗ್ರಾಂ), ಗೊಂಚಲುಗಳಲ್ಲಿ ಬಿಡುವ ತಳಿಯಾಗಿದ್ದು ಉತ್ತಮ ಫಸಲು ಕೊಡುತ್ತದೆ. ಪ್ರಾರಂಭದ ಒಂದೆರಡು ವರ್ಷಗಳಲ್ಲೇ ಹೂ ಬಿಡುವ ಹಾಗೂ ದೀರ್ಘಾವಧಿ (ಡಿಸೆಂಬರ್‌ನಿಂದ ಎಪ್ರಿಲ್ ತನಕ) ಹೂವು ಮತ್ತು ಗೇರು ಬೀಜ ಬಿಡುವ ತಳಿ. ತಿರುಳಿನ ಪ್ರಮಾಣ ಶೇ. 29.5 ಇರುತ್ತದೆ. ತಳಿಯು ಸವರುವಿಕೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವುದರಿಂದ ಘನ ಸಾಂದ್ರ ಪದ್ಧತಿಯಲ್ಲಿ ಬೇಸಾಯಕ್ಕೆ ಯೋಗ್ಯ. ಮೂರನೆ ವರ್ಷದಲ್ಲೇ ಗಿಡವೊಂದಕ್ಕೆ ಕೆಜಿಗಿಂತ ಮೇಲ್ಪಟ್ಟು ಇಳುವರಿ ಕೊಡುತ್ತದೆ.

Related posts

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya
error: Content is protected !!