ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

ಬೆಳ್ತಂಗಡಿ : ವಿಪರೀತ ಮಳೆಯಿಂದ ಭೂ ಕುಸಿತವಾಗಿ ಹಾನಿಯಾದ ಬೆಳ್ತಂಗಡಿ ತಾಲೂಕಿನ ಮೂರು ಪ್ರದೇಶಕ್ಕೆ ಕೇಂದ್ರ ಸರಕಾರದ ಎರಡು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರದ ಕಲ್ಲಗುಡ್ಡೆ ಟ್ರೀ ಪಾರ್ಕ್ ಬಳಿಯ ಭೂಕುಸಿತ ,ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ NDRF ತಂಡ ಮತ್ತು GSI ತಂಡ ಆ.8 ರಂದು ಸಂಜೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಸರಕಾರದ ಬೆಂಗಳೂರು ಕ್ಯಾಪ್ ನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಇನ್ಸ್ಪೆಕ್ಟರ್ ಶಾಂತಿ ಲಾಲು ಮತ್ತು ತಂಡದ ಸಿಬ್ಬಂದಿಗಳು ಹಾಗೂ GSI (geological serve of india) ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಇಬ್ಬರು ಅಧಿಕಾರಿಗಳು ಜಂಟಿಯಾಗಿ ಆ. 8 ರಂದು ಸಂಜೆ ಬೆಳ್ತಂಗಡಿಯ ಮೂರು ಪ್ರದೇಶಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಮಹಜರು ನಡೆಸಿ ಮಾಹಿತಿ ಕಲೆ ಹಾಕಿ ತೆರಳಿದ್ದಾರೆ‌.

Related posts

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!