24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು ಸಿಕ್ಕೇ ಸಿಗುತ್ತದೆ ‘ ಎಂದು ಮೂಡುಬಿದಿರೆಯ ನ್ಯಾಯವಾದಿ ಹಾಗೂ ನೋಟರಿ ಶ್ವೇತಾ ಜೈನ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಲವು ಸಾಧಕರ ಉದಾಹರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಗುರುತು ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ತರಗತಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ‘ನಾಯಕನಾದವನು ಮೊದಲು ತಾನು ಉತ್ತಮ ಶಿಸ್ತು ಮತ್ತು ವ್ಯಕ್ತಿತ್ವವನ್ನು ಹೊಂದಿ ಇತರರಿಗೆ ಪ್ರೇರಣೆಯಾಗಬೇಕು ‘ ಎಂದು ಹೇಳಿದರು.

ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಕೋರಿದರು.ವಿದ್ಯಾರ್ಥಿನಿ ಆತ್ಮಿ ಅವರು ಪರಿಚಯ ಮಾಡಿದರು. ಅನುಶ್ರೀ ನಿರೂಪಿಸಿ , ಯುಕ್ತಾ ವಂದಿಸಿದರು.

Related posts

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya
error: Content is protected !!