September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು ಸಿಕ್ಕೇ ಸಿಗುತ್ತದೆ ‘ ಎಂದು ಮೂಡುಬಿದಿರೆಯ ನ್ಯಾಯವಾದಿ ಹಾಗೂ ನೋಟರಿ ಶ್ವೇತಾ ಜೈನ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಲವು ಸಾಧಕರ ಉದಾಹರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಗುರುತು ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ತರಗತಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ‘ನಾಯಕನಾದವನು ಮೊದಲು ತಾನು ಉತ್ತಮ ಶಿಸ್ತು ಮತ್ತು ವ್ಯಕ್ತಿತ್ವವನ್ನು ಹೊಂದಿ ಇತರರಿಗೆ ಪ್ರೇರಣೆಯಾಗಬೇಕು ‘ ಎಂದು ಹೇಳಿದರು.

ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಕೋರಿದರು.ವಿದ್ಯಾರ್ಥಿನಿ ಆತ್ಮಿ ಅವರು ಪರಿಚಯ ಮಾಡಿದರು. ಅನುಶ್ರೀ ನಿರೂಪಿಸಿ , ಯುಕ್ತಾ ವಂದಿಸಿದರು.

Related posts

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya
error: Content is protected !!