July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್ ಆಗಿದ್ದು ಆ ಬಳಿಕ ಎರಡೂ ಕಡೆ ಸಾಗುವ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಉಜಿರೆ ಹಾಗೂ ಬೆಳ್ತಂಗಡಿ ಕಡೆ ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಈ ಮಧ್ಯೆ ಬಂದ ಆ್ಯಂಬುಲೆನ್ಸ್ ಟ್ರಾಫಿಕ್‌ನಲ್ಲಿ ಪರದಾಡಿದೆ.

ಉಜಿರೆಯಿಂದ ಬಂದ ಖಾಸಗಿ ಬಸ್ಸೆಂದು ಕಾಶಿಬೆಟ್ಟು ಬಸ್‌ ಸ್ಟಾಪ್ ನಲ್ಲಿದ್ದ ಸ್ವಲ್ಪ ಜಾಗದಲ್ಲೆ ತಿರುವು ಪಡೆದುಕೊಂಡು ವಾಪಾಸ್ಸಾಗಿದೆ.

ಕಾಶಿಬೆಟ್ಟುವಿನಲ್ಲಿ ರಸ್ತೆ ತೀರ ಕೆಟ್ಟು ಹೋಗಿದ್ದು ಭಾರೀ ಹೊಂಡ ನಿರ್ಮಾಣವಾಗಿದೆ. ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ.

Related posts

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!