23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್ ಆಗಿದ್ದು ಆ ಬಳಿಕ ಎರಡೂ ಕಡೆ ಸಾಗುವ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಉಜಿರೆ ಹಾಗೂ ಬೆಳ್ತಂಗಡಿ ಕಡೆ ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಈ ಮಧ್ಯೆ ಬಂದ ಆ್ಯಂಬುಲೆನ್ಸ್ ಟ್ರಾಫಿಕ್‌ನಲ್ಲಿ ಪರದಾಡಿದೆ.

ಉಜಿರೆಯಿಂದ ಬಂದ ಖಾಸಗಿ ಬಸ್ಸೆಂದು ಕಾಶಿಬೆಟ್ಟು ಬಸ್‌ ಸ್ಟಾಪ್ ನಲ್ಲಿದ್ದ ಸ್ವಲ್ಪ ಜಾಗದಲ್ಲೆ ತಿರುವು ಪಡೆದುಕೊಂಡು ವಾಪಾಸ್ಸಾಗಿದೆ.

ಕಾಶಿಬೆಟ್ಟುವಿನಲ್ಲಿ ರಸ್ತೆ ತೀರ ಕೆಟ್ಟು ಹೋಗಿದ್ದು ಭಾರೀ ಹೊಂಡ ನಿರ್ಮಾಣವಾಗಿದೆ. ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya
error: Content is protected !!