23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

ಬೆಳ್ತಂಗಡಿ : ವಿಪರೀತ ಮಳೆಯಿಂದ ಭೂ ಕುಸಿತವಾಗಿ ಹಾನಿಯಾದ ಬೆಳ್ತಂಗಡಿ ತಾಲೂಕಿನ ಮೂರು ಪ್ರದೇಶಕ್ಕೆ ಕೇಂದ್ರ ಸರಕಾರದ ಎರಡು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರದ ಕಲ್ಲಗುಡ್ಡೆ ಟ್ರೀ ಪಾರ್ಕ್ ಬಳಿಯ ಭೂಕುಸಿತ ,ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ NDRF ತಂಡ ಮತ್ತು GSI ತಂಡ ಆ.8 ರಂದು ಸಂಜೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಸರಕಾರದ ಬೆಂಗಳೂರು ಕ್ಯಾಪ್ ನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಇನ್ಸ್ಪೆಕ್ಟರ್ ಶಾಂತಿ ಲಾಲು ಮತ್ತು ತಂಡದ ಸಿಬ್ಬಂದಿಗಳು ಹಾಗೂ GSI (geological serve of india) ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಇಬ್ಬರು ಅಧಿಕಾರಿಗಳು ಜಂಟಿಯಾಗಿ ಆ. 8 ರಂದು ಸಂಜೆ ಬೆಳ್ತಂಗಡಿಯ ಮೂರು ಪ್ರದೇಶಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಮಹಜರು ನಡೆಸಿ ಮಾಹಿತಿ ಕಲೆ ಹಾಕಿ ತೆರಳಿದ್ದಾರೆ‌.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya
error: Content is protected !!