22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಹೆಚ್ಚಿನ ಜ್ಞಾನಗಳಿಸಿಕೊಳ್ಳಲು ಸಾಧ್ಯವಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಉತ್ತಮ ಪ್ರಯತ್ನವನ್ನು ಮಾಡಿದಾಗ ಜ್ಞಾನ ಗಳಿಸುವುದರೊಂದಿಗೆ ಉನ್ನತ ಸ್ಥಾನಮಾನವನ್ನು ಪಡೆಯಲು ಸಾಧ್ಯವಿದೆ. ವಯಸ್ಸಿನ ಮಿತಿಯಿಲ್ಲದೆ ಸ್ಕೌಟ್ ಗೈಡ್ಸ್ ಗೆ ಸೇರುವುದರಿಂದ ಉತ್ತಮ ಅವಕಾಶಗಳನ್ನು ಪಡೆಯಬಹುದು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಶಿಕ್ಷಣ ಸಂಸ್ಥೆಯಲ್ಲಿ ಬೇರೆಬೇರೆ ಸಂಘ-ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿದೆ .ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆಯುವಂತಾಗಬೇಕು ಎಂದರು.


ಆರ್ ಎಸ್ ಎಲ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಆರ್ ಎಲ್ ಶ್ರೀಮತಿ ರಕ್ಷಾ ವಂದಿಸಿದರು. ರೇಂಜರ್ ಸಿಂಚನಾ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya
error: Content is protected !!