ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಹೆಚ್ಚಿನ ಜ್ಞಾನಗಳಿಸಿಕೊಳ್ಳಲು ಸಾಧ್ಯವಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಉತ್ತಮ ಪ್ರಯತ್ನವನ್ನು ಮಾಡಿದಾಗ ಜ್ಞಾನ ಗಳಿಸುವುದರೊಂದಿಗೆ ಉನ್ನತ ಸ್ಥಾನಮಾನವನ್ನು ಪಡೆಯಲು ಸಾಧ್ಯವಿದೆ. ವಯಸ್ಸಿನ ಮಿತಿಯಿಲ್ಲದೆ ಸ್ಕೌಟ್ ಗೈಡ್ಸ್ ಗೆ ಸೇರುವುದರಿಂದ ಉತ್ತಮ ಅವಕಾಶಗಳನ್ನು ಪಡೆಯಬಹುದು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಶಿಕ್ಷಣ ಸಂಸ್ಥೆಯಲ್ಲಿ ಬೇರೆಬೇರೆ ಸಂಘ-ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿದೆ .ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆಯುವಂತಾಗಬೇಕು ಎಂದರು.


ಆರ್ ಎಸ್ ಎಲ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಆರ್ ಎಲ್ ಶ್ರೀಮತಿ ರಕ್ಷಾ ವಂದಿಸಿದರು. ರೇಂಜರ್ ಸಿಂಚನಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!