September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು ಸಿಕ್ಕೇ ಸಿಗುತ್ತದೆ ‘ ಎಂದು ಮೂಡುಬಿದಿರೆಯ ನ್ಯಾಯವಾದಿ ಹಾಗೂ ನೋಟರಿ ಶ್ವೇತಾ ಜೈನ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಲವು ಸಾಧಕರ ಉದಾಹರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಗುರುತು ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ತರಗತಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ‘ನಾಯಕನಾದವನು ಮೊದಲು ತಾನು ಉತ್ತಮ ಶಿಸ್ತು ಮತ್ತು ವ್ಯಕ್ತಿತ್ವವನ್ನು ಹೊಂದಿ ಇತರರಿಗೆ ಪ್ರೇರಣೆಯಾಗಬೇಕು ‘ ಎಂದು ಹೇಳಿದರು.

ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಕೋರಿದರು.ವಿದ್ಯಾರ್ಥಿನಿ ಆತ್ಮಿ ಅವರು ಪರಿಚಯ ಮಾಡಿದರು. ಅನುಶ್ರೀ ನಿರೂಪಿಸಿ , ಯುಕ್ತಾ ವಂದಿಸಿದರು.

Related posts

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!