22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು ಸಿಕ್ಕೇ ಸಿಗುತ್ತದೆ ‘ ಎಂದು ಮೂಡುಬಿದಿರೆಯ ನ್ಯಾಯವಾದಿ ಹಾಗೂ ನೋಟರಿ ಶ್ವೇತಾ ಜೈನ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಲವು ಸಾಧಕರ ಉದಾಹರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಗುರುತು ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ತರಗತಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ‘ನಾಯಕನಾದವನು ಮೊದಲು ತಾನು ಉತ್ತಮ ಶಿಸ್ತು ಮತ್ತು ವ್ಯಕ್ತಿತ್ವವನ್ನು ಹೊಂದಿ ಇತರರಿಗೆ ಪ್ರೇರಣೆಯಾಗಬೇಕು ‘ ಎಂದು ಹೇಳಿದರು.

ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಕೋರಿದರು.ವಿದ್ಯಾರ್ಥಿನಿ ಆತ್ಮಿ ಅವರು ಪರಿಚಯ ಮಾಡಿದರು. ಅನುಶ್ರೀ ನಿರೂಪಿಸಿ , ಯುಕ್ತಾ ವಂದಿಸಿದರು.

Related posts

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya
error: Content is protected !!