ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಗೆ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಸೇವೆಯು ನಡೆಯಿತು.

ಬಸದಿಯ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ. ಜಯವರ್ಮರಾಜ್ ಬಳ್ಳಾಲ್ ಇವರ ಮಾರ್ಗದರ್ಶನದಲ್ಲಿ ವಿಧಿ ವಿಧಾನಗಳು ನೆರವೇರಿತು. ಬಸದಿಗೆ ಸಂಬಂಧಿಸಿದ ಶ್ರಾವಕ ಮತ್ತು ಶ್ರಾವಿಕೆಯರು ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಸಹಕರಿಸಿದರು. ಪೂಜಾ ವಿಧಿ ವಿಧಾನಗಳನ್ನು ಬಸದಿಯ ಪ್ರಧಾನ ಅರ್ಚಕರಾದ ಜಯರಾಜ್ ಇಂದ್ರ ರವರು ನೆರವೇರಿಸಿಕೊಟ್ಟರು.

Leave a Comment

error: Content is protected !!