July 23, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

ಬೆಳ್ತಂಗಡಿ : ವಿಪರೀತ ಮಳೆಯಿಂದ ಭೂ ಕುಸಿತವಾಗಿ ಹಾನಿಯಾದ ಬೆಳ್ತಂಗಡಿ ತಾಲೂಕಿನ ಮೂರು ಪ್ರದೇಶಕ್ಕೆ ಕೇಂದ್ರ ಸರಕಾರದ ಎರಡು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರದ ಕಲ್ಲಗುಡ್ಡೆ ಟ್ರೀ ಪಾರ್ಕ್ ಬಳಿಯ ಭೂಕುಸಿತ ,ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ NDRF ತಂಡ ಮತ್ತು GSI ತಂಡ ಆ.8 ರಂದು ಸಂಜೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಸರಕಾರದ ಬೆಂಗಳೂರು ಕ್ಯಾಪ್ ನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಇನ್ಸ್ಪೆಕ್ಟರ್ ಶಾಂತಿ ಲಾಲು ಮತ್ತು ತಂಡದ ಸಿಬ್ಬಂದಿಗಳು ಹಾಗೂ GSI (geological serve of india) ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಇಬ್ಬರು ಅಧಿಕಾರಿಗಳು ಜಂಟಿಯಾಗಿ ಆ. 8 ರಂದು ಸಂಜೆ ಬೆಳ್ತಂಗಡಿಯ ಮೂರು ಪ್ರದೇಶಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಮಹಜರು ನಡೆಸಿ ಮಾಹಿತಿ ಕಲೆ ಹಾಕಿ ತೆರಳಿದ್ದಾರೆ‌.

Related posts

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!