September 6, 2026
Uncategorized

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ: ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು CA ಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆ. 10 ರಂದು ನಡೆಯಿತು.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕಗುಣವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಆಡಳಿತ ಅಧಿಕಾರಿಗಳಾದ ಚಂದ್ರಶೇಖರವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಈಗಿನಿಂದಲೇ ನಡೆಸಬೇಕೆಂದು ತಿಳಿ ಹೇಳಿದರು.
ವಿದ್ವತ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೋರವರು ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯುವ CA ಪೌಂಡೇಶನ್ ತರಬೇತಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿಯನ್ನು ನಡೆಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಜಯೇಂದ್ರ ಬಂದ್ಯಾನ್, ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಮಹಿತ ಕುಮಾರಿ, ಕನ್ನಡ ವಿಭಾಗದ ಉಪನ್ಯಾಸಕರಾದ ನೀಲಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಆಶಿಕ್ ಬಾಲಚಂದ್ರ ನಿರೂಪಿಸಿದರು.

Related posts

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya
error: Content is protected !!