23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ: ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು CA ಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆ. 10 ರಂದು ನಡೆಯಿತು.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕಗುಣವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಆಡಳಿತ ಅಧಿಕಾರಿಗಳಾದ ಚಂದ್ರಶೇಖರವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಈಗಿನಿಂದಲೇ ನಡೆಸಬೇಕೆಂದು ತಿಳಿ ಹೇಳಿದರು.
ವಿದ್ವತ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೋರವರು ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯುವ CA ಪೌಂಡೇಶನ್ ತರಬೇತಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿಯನ್ನು ನಡೆಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಜಯೇಂದ್ರ ಬಂದ್ಯಾನ್, ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಮಹಿತ ಕುಮಾರಿ, ಕನ್ನಡ ವಿಭಾಗದ ಉಪನ್ಯಾಸಕರಾದ ನೀಲಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಆಶಿಕ್ ಬಾಲಚಂದ್ರ ನಿರೂಪಿಸಿದರು.

Related posts

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya
error: Content is protected !!