24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ: ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು CA ಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆ. 10 ರಂದು ನಡೆಯಿತು.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕಗುಣವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಆಡಳಿತ ಅಧಿಕಾರಿಗಳಾದ ಚಂದ್ರಶೇಖರವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಈಗಿನಿಂದಲೇ ನಡೆಸಬೇಕೆಂದು ತಿಳಿ ಹೇಳಿದರು.
ವಿದ್ವತ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೋರವರು ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯುವ CA ಪೌಂಡೇಶನ್ ತರಬೇತಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿಯನ್ನು ನಡೆಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಜಯೇಂದ್ರ ಬಂದ್ಯಾನ್, ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಮಹಿತ ಕುಮಾರಿ, ಕನ್ನಡ ವಿಭಾಗದ ಉಪನ್ಯಾಸಕರಾದ ನೀಲಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಆಶಿಕ್ ಬಾಲಚಂದ್ರ ನಿರೂಪಿಸಿದರು.

Related posts

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya
error: Content is protected !!