25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ: ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು CA ಪೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆ. 10 ರಂದು ನಡೆಯಿತು.
ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿರುವ ವಿಫುಲವಾದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕಗುಣವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ವತ್ ಪಿಯು ಕಾಲೇಜಿನ ಆಡಳಿತ ಅಧಿಕಾರಿಗಳಾದ ಚಂದ್ರಶೇಖರವರು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ಈಗಿನಿಂದಲೇ ನಡೆಸಬೇಕೆಂದು ತಿಳಿ ಹೇಳಿದರು.
ವಿದ್ವತ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೋರವರು ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯುವ CA ಪೌಂಡೇಶನ್ ತರಬೇತಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತೃತ ಮಾಹಿತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿಯನ್ನು ನಡೆಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಜಯೇಂದ್ರ ಬಂದ್ಯಾನ್, ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ. ಮಹಿತ ಕುಮಾರಿ, ಕನ್ನಡ ವಿಭಾಗದ ಉಪನ್ಯಾಸಕರಾದ ನೀಲಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಆಶಿಕ್ ಬಾಲಚಂದ್ರ ನಿರೂಪಿಸಿದರು.

Related posts

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya
error: Content is protected !!