26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

 ಉಜಿರೆ:  ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ  ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಹತ್ತಕ್ಕೂ ಅಧಿಕ ತೆಂಗಿನ ಗಿಡಗಳನ್ನು ಸಂಪೂರ್ಣವಾಗಿ ನಾಶಗೊಳಿಸಿದೆ. ಇಲ್ಲಿನ ನಿವಾಸಿ ಜೋ ಸೆಫ್. ಪಿ.ಕೆ ಎಂಬವರ ತೋಟಕ್ಕೂ ಕಾಡಾನೆ ನುಗ್ಗಿದೆ, ಇಲ್ಲಿಯೂ ಅಡಕೆ ಹಾಗೂ ತೆಂಗಿನ ಗಿಡಗಳಿಗೆ ಹಾನಿಯುಂಟು ಮಾಡಿದೆ. ಇಲ್ಲಿ ಸಮೀಪದ ಇತರ ತೋಟಗಳಿಗೂ ಕಾಡಾನೆಗಳು ನುಗ್ಗುತ್ತಿದ್ದು ಕೃಷಿಗೆ ಹಾನಿಯುಂಟುಮಾಡುತ್ತಿದೆ. ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿ ನಲ್ಲಿದ್ದು  ಸಂಜೆಯಾಗುವಾಗಲೇ ಕಾಡಾನೆಗಳು ತೋಟಗಳಿಗೆ ನುಗ್ಗುತ್ತಿದೆ.ಹಗಲು ಹೊತ್ತಿನಲ್ಲಿಯೂ ಕಾಡಾನೆಗಳು ತೋಟಗಳ ಪರಿಸರದಲ್ಲಿ ಕಾಣಿಸುತ್ತಿದೆ. ಇದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ.  ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಕೃಷಿಕರು ಒತ್ತಾಯಿಸುತ್ತಿದ್ದಾರೆ

Related posts

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya
error: Content is protected !!