37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

 ಉಜಿರೆ:  ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ  ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಹತ್ತಕ್ಕೂ ಅಧಿಕ ತೆಂಗಿನ ಗಿಡಗಳನ್ನು ಸಂಪೂರ್ಣವಾಗಿ ನಾಶಗೊಳಿಸಿದೆ. ಇಲ್ಲಿನ ನಿವಾಸಿ ಜೋ ಸೆಫ್. ಪಿ.ಕೆ ಎಂಬವರ ತೋಟಕ್ಕೂ ಕಾಡಾನೆ ನುಗ್ಗಿದೆ, ಇಲ್ಲಿಯೂ ಅಡಕೆ ಹಾಗೂ ತೆಂಗಿನ ಗಿಡಗಳಿಗೆ ಹಾನಿಯುಂಟು ಮಾಡಿದೆ. ಇಲ್ಲಿ ಸಮೀಪದ ಇತರ ತೋಟಗಳಿಗೂ ಕಾಡಾನೆಗಳು ನುಗ್ಗುತ್ತಿದ್ದು ಕೃಷಿಗೆ ಹಾನಿಯುಂಟುಮಾಡುತ್ತಿದೆ. ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿ ನಲ್ಲಿದ್ದು  ಸಂಜೆಯಾಗುವಾಗಲೇ ಕಾಡಾನೆಗಳು ತೋಟಗಳಿಗೆ ನುಗ್ಗುತ್ತಿದೆ.ಹಗಲು ಹೊತ್ತಿನಲ್ಲಿಯೂ ಕಾಡಾನೆಗಳು ತೋಟಗಳ ಪರಿಸರದಲ್ಲಿ ಕಾಣಿಸುತ್ತಿದೆ. ಇದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ.  ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಕೃಷಿಕರು ಒತ್ತಾಯಿಸುತ್ತಿದ್ದಾರೆ

Related posts

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!