23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

 ಉಜಿರೆ:  ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ  ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಹತ್ತಕ್ಕೂ ಅಧಿಕ ತೆಂಗಿನ ಗಿಡಗಳನ್ನು ಸಂಪೂರ್ಣವಾಗಿ ನಾಶಗೊಳಿಸಿದೆ. ಇಲ್ಲಿನ ನಿವಾಸಿ ಜೋ ಸೆಫ್. ಪಿ.ಕೆ ಎಂಬವರ ತೋಟಕ್ಕೂ ಕಾಡಾನೆ ನುಗ್ಗಿದೆ, ಇಲ್ಲಿಯೂ ಅಡಕೆ ಹಾಗೂ ತೆಂಗಿನ ಗಿಡಗಳಿಗೆ ಹಾನಿಯುಂಟು ಮಾಡಿದೆ. ಇಲ್ಲಿ ಸಮೀಪದ ಇತರ ತೋಟಗಳಿಗೂ ಕಾಡಾನೆಗಳು ನುಗ್ಗುತ್ತಿದ್ದು ಕೃಷಿಗೆ ಹಾನಿಯುಂಟುಮಾಡುತ್ತಿದೆ. ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿ ನಲ್ಲಿದ್ದು  ಸಂಜೆಯಾಗುವಾಗಲೇ ಕಾಡಾನೆಗಳು ತೋಟಗಳಿಗೆ ನುಗ್ಗುತ್ತಿದೆ.ಹಗಲು ಹೊತ್ತಿನಲ್ಲಿಯೂ ಕಾಡಾನೆಗಳು ತೋಟಗಳ ಪರಿಸರದಲ್ಲಿ ಕಾಣಿಸುತ್ತಿದೆ. ಇದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ.  ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳುವಂತೆ ಕೃಷಿಕರು ಒತ್ತಾಯಿಸುತ್ತಿದ್ದಾರೆ

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya
error: Content is protected !!